Advertisement

ಬಾಂಗ್ಲಾದೇಶದಲ್ಲಿ ಸರಕಾರಿ ಉದ್ಯೋಗ ಮೀಸಲಾತಿ ವ್ಯವಸ್ಥೆ ರದ್ದು

03:48 PM Apr 12, 2018 | Team Udayavani |

ಢಾಕಾ : ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸುವ “ಕೋಟಾ ಸಿಸ್ಟಮ್‌’ ಅನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ವಿದ್ಯಾರ್ಥಿಗಳ ಚಳವಳಿಗೆ ಮಣಿದು ರದ್ದು ಮಾಡಲು ನಿರ್ಧರಿಸಿದ್ದಾರೆ.

Advertisement

ವಿಶೇಷ ಸಮೂಹಗಳಿಗೆ ಸರಕಾರಿ ಉದ್ಯೋಗದಲ್ಲಿ ಕೋಟಾ ಕಲ್ಪಿಸುವ ವ್ಯವಸ್ಥೆಯ ವಿರುದ್ಧ ಢಾಕಾದಲ್ಲಿ ವಿದ್ಯಾರ್ಥಿಗಳು ಪ್ರಬಲ ಪ್ರತಿಭಟನೆ ನಡೆಸಿ ಪ್ರಮುಖ ರಸ್ತೆಗಳನ್ನು ತಡೆದು ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದರು. 

ಢಾಕಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಹಿಂಸಾತ್ಮಕ ಪ್ರತಿಭಟನೆಯನ್ನು ಹತ್ತಿಕ್ಕಲು ಸರಕಾರ ಪೊಲೀಸರನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಿತ್ತು. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಘರ್ಷದಲ್ಲಿ  ಅಶ್ರುವಾಯ ಮತ್ತು ರಬ್ಬರ್‌ ಗುಂಡುಗಳು ಪ್ರಯೋಗಿಸಲ್ಪಟ್ಟ ಕಾರಣ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. 

ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿದ ಪ್ರಧಾನಿ ಹಸೀನಾ ಅವರು  ಸರಕಾರಿ ಉದ್ಯೋಗದಲ್ಲಿರುವ ಕೋಟಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದು ಪಡಿಸುವ ನಿರ್ಧಾರ ಕೈಗೊಂಡರು ಎಂದು ವರದಿಗಳು ತಿಳಿಸಿವೆ. 

ಹಾಗಿದ್ದರೂ ಸರಕಾರ ವಿಕಲಾಂಗರಿಗೆ ಮತ್ತು ಜನಾಂಗೀಯವಾಗಿ ಹಿಂದುಳಿದ ಅಲ್ಪಸಂಖ್ಯಾಕರಿಗೆ ಸರಕಾರಿ ಉದ್ಯೋಗದಲ್ಲಿರುವ ಮೀಸಲಾತಿಯನ್ನು ಮುಂದುವರಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next