Advertisement

ಪೌರತ್ವ ತಿದ್ದುಪಡಿ ಮಸೂದೆ;ಭಾರತ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ ಬಾಂಗ್ಲಾ ವಿದೇಶಾಂಗ ಸಚಿವ

09:56 AM Dec 13, 2019 | Nagendra Trasi |

ಢಾಕಾ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ.ಅಬ್ದುಲ್ ಮೊಮೆನ್ ಭಾರತದ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ವಿದೇಶಾಂಗ ಸಚಿವಾಲಯಗಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಾಂಗ್ಲಾ ವಿದೇಶಾಂಗ ಸಚಿವ ಎಕೆ ಅಬ್ದುಲ್ ಭಾಗವಹಿಸಬೇಕಿತ್ತು. ಆದರೆ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದರಿಂದ ಭೇಟಿಯನ್ನು ರದ್ದುಪಡಿಸಿರುವುದಾಗಿ ವರದಿ ವಿವರಿಸಿದೆ.

ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ ಪ್ರಕಾರ ಬಾಂಗ್ಲಾದೇಶ ಸೇರಿದಂತೆ ನೆರೆಯ ಮೂರು ದೇಶಗಳ ಮುಸ್ಲಿಮೇತರ ವಲಸಿಗ ನಿರಾಶ್ರಿತರಿಗೆ ಭಾರತದ ಕಾಯಂ ಪೌರತ್ವ ನೀಡಲಿದೆ.

ಬಾಂಗ್ಲಾ ವಿದೇಶಾಂಗ ಸಚಿವರ ಭಾರತದ ಭೇಟಿ ಈಗ ರದ್ದುಗೊಳಿಸಲಾಗಿದೆ. ಮುಂದಿನ ಭೇಟಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಬೆಳವಣಿಗೆ ಕುರಿತು ನಿಕಟವರ್ತಿಯೊಬ್ಬರು ತಿಳಿಸಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next