Advertisement

ಬಾಂಗ್ಲಾದಲ್ಲಿ ಕಟ್ಟೆಚ್ಚರ

08:15 AM Feb 08, 2018 | Team Udayavani |

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಗುರುವಾರ ಹೊರಬೀಳಲಿದೆ. ಹೀಗಾಗಿ ರಾಜಧಾನಿ ಢಾಕಾ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಶಸ್ತ್ರಸಜ್ಜಿತ ಪೊಲೀಸರನ್ನು ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ. ಪ್ರಧಾನಿ ಶೇಕ್‌ ಹಸೀನಾ ಸೇರಿದಂತೆ ಪ್ರಮುಖ ನಾಯಕರ ನಿವಾಸಗಳ ಸುತ್ತಮುತ್ತ ಭದ್ರತೆ ಬಿಗಿಗೊಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ 1 ಸಾವಿರಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿದೇಶಿ ದೇಣಿಗೆ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಕ್ಷದ ನಾಯಕಿ ವಿರುದ್ಧ ಕೇಸು ದಾಖಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next