Advertisement

ಬೆಂಗಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಮತ್ತೊಂದು ಅಪಘಾತ; 13 ಮಂದಿಗೆ ಗಾಯ

09:58 AM May 29, 2019 | Team Udayavani |

ಬೆಂಗಳೂರು: ಯಲಹಂಕದ ಬಳಿ ಏರ್‌ಪೋರ್ಟ್‌ ರಸ್ತೆಯಲ್ಲಿ ಮಂಗಳವಾರ ಮತ್ತೊಂದು ಅಪಘಾತ ಸಂಭವಿಸಿದ್ದು, ಲಾರಿ ಢಿಕ್ಕಿಯಾದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 13 ಮಂದಿ ಗಾಯಗೊಂಡಿದ್ದಾರೆ. ಬಸ್‌ ಚಾಲಕನ ಕಾಲು ತುಂಡಾಗಿದೆ.

Advertisement

ಅನಂತಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅತಿ ವೇಗವಾಗಿ ಹೋಗುತ್ತಿದ್ದ ಸರ್ಕಾರಿ ಆ್ಯಂಬುಲೆನ್ಸ್‌, ಪಕ್ಕದಲ್ಲಿದ್ದ ಲಾರಿಯನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಪಶ್ಚಿಮ ಬಂಗಾಳ ಮೂಲದ ಕುಟುಂಬದ ಮೂವರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಯಲಹಂಕದಕೋಗಿಲು ಕ್ರಾಸ್‌ ಮೇಲ್ಸೇತುವೆಯಲ್ಲಿ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next