Advertisement

ಕನ್ನಡದಲ್ಲಿ ಬ್ಯಾಂಕ್‌ ಪರೀಕ್ಷೆ: ಮಣಿದ ಕೇಂದ್ರ ಸರಕಾರ

02:13 AM Jul 14, 2021 | Team Udayavani |

ಹೊಸದಿಲ್ಲಿ : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಕ್ಲರ್ಕ್‌ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರಕಾರ, ಕನ್ನಡಿಗರ ಹೋರಾಟಕ್ಕೆ ಮಣಿದಿದೆ.

Advertisement

ಇಂಗ್ಲಿಷ್‌ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಕೇಂದ್ರ ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳವಾರ ಈ ಪರೀಕ್ಷೆಗೆ ತಡೆ ನೀಡಿದೆ.

ಜತೆಗೆ ಕನ್ನಡ ಸೇರಿದಂತೆ ಪ್ರಾದೇಶಿಕ ಪರೀಕ್ಷೆಗಳಲ್ಲಿ ಪರೀಕ್ಷೆ ನಡೆಸುವ ಸಂಬಂಧ ತೀರ್ಮಾನಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಈ ವರದಿ ಬಂದ ಬಳಿಕ ಶಿಫಾರಸಿನ ಅನ್ವಯದ ಮೇರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next