Advertisement
ಸುಮಾರು 9 ಬ್ಯಾಂಕ್ ನೌಕರರ ಸಂಘಗಳ ಒಕ್ಕೂಟವಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ಈ ಮುಷ್ಕರಕ್ಕೆ ಕರೆನೀಡಿದ್ದು, 10 ಲಕ್ಷಕ್ಕೂ ಅಧಿಕ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.“ಮಂಗಳವಾರ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಮುಚ್ಚುವ ಕಾರಣ ಯಾವುದೇ ವಹಿವಾಟು ನಡೆಯುವುದಿಲ್ಲ,’ ಎಂದು ಅಖೀಲ ಭಾರತ ಎಸ್ಬಿಐ ಅಧಿಕಾರಿಗಳ ಸಮನ್ವಯ ಸಮಿತಿ ಅಧ್ಯಕ್ಷ ಎಂ.ಎಸ್. ಜೈಶಂಕರ್ ಹೇಳಿದ್ದಾರೆ.
ಬ್ಯಾಂಕುಗಳ ಖಾಸಗೀಕರಣಕ್ಕೆ ವಿರೋಧ, ಉದ್ದೇಶಪೂರ್ವಕ ಸುಸ್ತಿದಾರರ ವಿರುದಟಛಿ ಕ್ರಿಮಿನಲ್ ಕ್ರಮ, ಅನುತ್ಪಾದಕ ಆಸ್ತಿ(ಎನ್ಪಿಎ)ಗಳ ವಾಪಸ್ಗೆ ಸಂಬಂಧಿಸಿ ಸಂಸದೀಯ ಸಮಿತಿಯ ಶಿಫಾರಸುಗಳ ಅನುಷ್ಠಾನ, ಬ್ಯಾಂಕ್ಸ್ ಬೋರ್ಡ್
ಬ್ಯೂರೋಗಳ ಸ್ಥಗಿತ, ನೋಟುಗಳ ಅಮಾನ್ಯದ ವೇಳೆ ಆಗಿರುವ ವೆಚ್ಚ ಹಾಗೂ ಜನಧನದ ಪ್ರಚಾರಕ್ಕೆ ಮಾಡಿದ ವೆಚ್ಚಗಳನ್ನು ಸರ್ಕಾರವೇ ಭರಿಸಬೇಕು ಎಂಬಿತ್ಯಾದಿ ಆಗ್ರಹಗಳನ್ನು ಮುಂದಿಟ್ಟಿಕೊಂಡು ಬ್ಯಾಂಕುಗಳು ಮುಷ್ಕರ ನಡೆಸುತ್ತಿವೆ.
ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.