Advertisement

ಬಂಟ್ವಾಳ: ಗ್ರಾ.ಪಂ.ಸದಸ್ಯ ಹಾಗೂ ಪತ್ನಿಗೆ ಇರಿತ: ಬೆಳ್ಳಂಬೆಳಗ್ಗೆ ಬೆಚ್ಚಿಬೀಳಿಸುವ ಘಟನೆ

09:43 AM Nov 30, 2019 | Mithun PG |

ಬಂಟ್ವಾಳ: ತಾಲೂಕಿನ ಮೇರಮಜಲು ಗ್ರಾ.ಪಂ. ಸದಸ್ಯ ಹಾಗೂ ಅವರ ಪತ್ನಿಗೆ  ದುಷ್ಕರ್ಮಿಗಳ ತಂಡವೊಂದು ಮನೆಗೆ ನುಗ್ಗಿ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

Advertisement

ಪಂಚಾಯಿತಿ ಸದಸ್ಯಯ ಯೋಗೀಶ್ ಪ್ರಭು ಹಾಗೂ ಅವರ ಪತ್ನಿ ಶೋಭಾ ಗಾಯಗೊಂಡವರು. ಹಲ್ಲೆ ನಡೆಸಿದ ಬಳಿಕ ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾಗಿದೆ. ಮುಂಜಾನೆ ಸುಮಾರು 4 ಗಂಟೆಯ ವೇಳೆ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇರೆಮಜಲು ನಿವಾಸಿ ರೌಡಿಶೀಟರ್ ಪ್ರಸಾದ್ ಬೆಳ್ಚಾಡ ಮತ್ತು ಆತನ ಜೊತೆ ಇಬ್ಬರು ಸ್ನೇಹಿತರು ಸೇರಿ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಯೋಗೀಶ್ ಪ್ರಭು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್, ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್, ಪಿಎಸ್ಐ ಪ್ರಸನ್ನ ಹಾಗೂ ಸಿಬಂದಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Advertisement

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next