Advertisement

ಕೆಲಸದ ವೇಳೆ ಕರೆಂಟ್ ಶಾಕ್: ಕೇರಳದಲ್ಲಿ ಬಂಟ್ವಾಳ ಮೂಲದ ವ್ಯಕ್ತಿ ಸಾವು

07:07 PM Sep 07, 2022 | Team Udayavani |

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಂಟ್ವಾಳದ ವ್ಯಕ್ತಿಯೋರ್ವರು   ಕೇರಳದ ಕಂಪೆನಿಯೊದರಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement

ಸಜೀಪಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ ವಿದ್ಯಾದರ ಕುಲಾಲ್(35) ಮೃತಪಟ್ಟ ವ್ಯಕ್ತಿ. ಅವರು ಕೇರಳದ ಖಾಸಗಿ ಎಲೆಕ್ಟ್ರಾನಿಕ್  ಕಂಪೆನಿಯೊಂದರಲ್ಲಿ  ಕೆಲಸ ಮಾಡುತ್ತಿದ್ದರು. ಸೆ.5ರಂದು  ಸೋಮವಾರ ಕರ್ತವ್ಯದಲ್ಲಿರುವಾಗ ವಿದ್ಯುತ್ ಹರಿದು ಅವರು ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವ್ಯಕ್ತಿ ವಿದ್ಯುತ್ ತಂತಿ ತಗುಲಿ ಸಾವು

ಮೂಲತ: ಬೆಳ್ಳಾರೆ ನಿವಾಸಿ ಯಾಗಿದ್ದ ಇವರು ಇತ್ತೀಚೆಗೆ ಸಜೀಪಮುನ್ನೂರು ಗ್ರಾಮದ ಮರ್ತಾಜೆ ಎಂಬಲ್ಲಿ ಜಾಗ ಖರೀದಿ ಮಾಡಿ ಮನೆ ಕಟ್ಟಿದ್ದರು.

ಕಳೆದ ಒಂದು ವರ್ಷದ ಹಿಂದೆ ಇವರಿಗೆ ವಿವಾಹವಾಗಿದ್ದು, ಪತ್ನಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಉದ್ಯೋಗದಲ್ಲಿದ್ದರು. ಪತ್ನಿ ತುಂಬು ಗರ್ಭಿಣಿಯಾಗಿದ್ದು, ಬರುವ ತಿಂಗಳು ಸೀಮಂತಕ್ಕೆ ದಿನಾಂಕ ನಿಗದಿಯಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next