Advertisement

ಬಂಟ್ವಾಳ: ಟಿಪ್ಪರ್‌ಗೆ ಬುಲೆಟ್‌ ಮುಖಾಮುಖಿ ಢಿಕ್ಕಿ; ಇಬ್ಬರ ಸಾವು

10:00 AM May 09, 2019 | Vishnu Das |

ಬಂಟ್ವಾಳ: ಟಿಪ್ಪರ್ ಗೆ ಮುಖಾಮುಖಿಯಾಗಿ ಢಿಕ್ಕಿಯಾದ ಪರಿಣಾಮ ಬುಲೆಟ್‌ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಅವಘಡ ಅಣ್ಣಳಿಕೆ ಹಿರ್ಣಿ ರಸ್ತೆ ನಡುವಿನ ಕುಮೇರ್ ಎಂಬಲ್ಲಿ ಬುಧವಾರ ಸಂಭವಿಸಿದೆ.

Advertisement

ಮೃತರು ಸಿದ್ಧಕಟ್ಟೆಯ ಹಿರ್ಣಿ ನಿವಾಸಿ ರಮೇಶ್ ಪೂಜಾರಿ ಅವರ ಪುತ್ರ, ಬೈಕ್ ಸವಾರ ಸುರೇಂದ್ರ (33), ಸಹ ಸವಾರಿಯಾಗಿದ್ದ ಮೃತರ ಸಂಬಂಧಿ ಜಯಲಕ್ಷ್ಮೀ (36) ಎನ್ನುವವರಾಗಿದ್ದಾರೆ.

ಕೊಡಿಯಾಲ್‌ಬೈಲ್‌ಗೆ ತೆರಳುತ್ತಿದ್ದಾಗ ಕರ್ಪೆಯಿಂದ ಬರುತ್ತಿದ್ದ ಟಿಪ್ಪರ್ ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವಾಗಕೊನೆಯುಸಿರೆಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಟ್ವಾಳ ಟ್ರಾಫಿಕ್ ಎಸ್ಸೈ ಮಂಜುನಾಥ್, ಎಎಸ್ಸೈ ಎಂ.ಕೆ.ಕುಟ್ಟಿ ಸೇರಿ ಪೊಲೀಸರು ಸ್ಥಳಕೆಕ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next