Advertisement

Bantwal: ಗ್ಯಾಸ್‌ ಸಿಲಿಂಡರ್ ಕಳವು ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

08:57 PM Sep 03, 2024 | Team Udayavani |

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗ್ಯಾಸ್‌ ಸಿಲಿಂರ್ಡ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಕೋಟೆರ್ಕಾ ನಿವಾಸಿ ಶರೀಫ್ ಸಿ.ಅಬ್ಟಾಸ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.

ಆರೋಪಿಯು ಸುಮಾರು 22 ವರ್ಷಗಳ ಹಿಂದೆ ಬಿ.ಸಿ.ರೋಡಿನ ಗ್ಯಾಸ್‌ ಏಜನ್ಸಿಯೊಂದರಿಂದ ಗ್ಯಾಸ್‌ ಸಿಲಿಂರ್ಡ ಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾಗಿ ಆತನಿಗೆ ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಆರೋಪಿಯು ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಆತನ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಂಗಳೂರಿನ ಬೈಕಂಪಾಡಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೊಲೀಸ್‌ ಇನ್ಸ್ಪೆಕ್ಟರ್ ತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ರಾಮಕೃಷ್ಣ ಅವರ ನೇತೃತ್ವದಲ್ಲಿ ಸಿಬಂದಿ ಗಣೇಶ, ರಾಜೇಶ್‌ ಹಾಗೂ ಇರ್ಷಾದ್‌ ಅವರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next