Advertisement

ಬಂಟ್ವಾಳ ಎಪಿಎಂಸಿ: ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

01:47 PM Jun 11, 2020 | keerthan |

ಬಂಟ್ವಾಳ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ನೇಮಿರಾಜ ರೈ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದ ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ.

Advertisement

ಗುರುವಾರ ಬಂಟ್ವಾಳ ಎಪಿಎಂಸಿ ಕಚೇರಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರು ಚುನಾವಣೆಯನ್ನು ನಡೆಸಿಕೊಟ್ಟರು. ಹಿಂದಿನ ಅಧ್ಯಕ್ಷ-ಉಪಾಧ್ಯಕ್ಷರ 20 ತಿಂಗಳ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ಆಯ್ಕೆಗೊಂಡ ನೇಮಿರಾಜ ರೈ ಅವರು ಮಾಣಿ ಕ್ಷೇತ್ರದಿಂದ ಹಾಗೂ ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಅವರು ತುಂಬೆ ಕ್ಷೇತ್ರದಿಂದ ನಿರ್ದೇಶಕರಾಗಿ ಚುನಾಯಿತರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next