Advertisement

Bantwal ಆಟೋ ರಿಕ್ಷಾ- ಕಾರು ಢಿಕ್ಕಿ; ಗಾಯ

01:03 AM Sep 05, 2023 | Team Udayavani |

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ವಗ್ಗದ ಕಾಡಬೆಟ್ಟು ಕ್ರಾಸ್‌ ಬಳಿ ಆಟೋ ರಿಕ್ಷಾ ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಆಟೋ ಚಾಲಕ ಸಹಿತ 4 ಮಂದಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.

Advertisement

ಆಟೋರಿಕ್ಷಾ ಚಾಲಕ ಸಂಜೀವ ಪೂಜಾರಿ, ಬಾಲಕಿ ಶ್ರೀನಿತಾ, ಪದ್ಮಲತಾ, ಅಪ್ಪಿ ಪೂಜಾರಿ ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಮ್ಮದ್‌ ಪಾರಾಗಿದ್ದಾರೆ. ಆಟೋ ರಿಕ್ಷಾ ವಾಮದಪದವು ರಸ್ತೆಯಿಂದ ಹೆದ್ದಾರಿ ಪ್ರವೇಶಿಸುತ್ತಿದ್ದು, ಕಾರು ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next