Advertisement

Bantwal; ಪತ್ನಿ ಮನೆಯಲ್ಲಿ ಆತ್ಮಹತ್ಯೆ

12:11 AM Sep 12, 2023 | Team Udayavani |

ಬಂಟ್ವಾಳ: ಉಳ್ಳಾಲ ಕೊಂಡಾಣ ಮೂಲದ ವ್ಯಕ್ತಿಯೋರ್ವ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿರುವ ಪತ್ನಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 10ರಂದು ನಡೆದಿದೆ.

Advertisement

ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಸೆ. 10ರಂದು ಪತ್ನಿಯ ಮನೆಗೆ ಆಗಮಿಸಿದ್ದು, ಮಧ್ಯಾಹ್ನ 12ರ ಸುಮಾರಿಗೆ ಪತ್ನಿ ಹಾಗೂ ಪುತ್ರನನ್ನು ಸಂಬಂಧಿಕರ ಮನೆಯ ಶುಭ ಕಾರ್ಯಕ್ಕೆ ಬಿಟ್ಟು ಪತ್ನಿಯ ಮನೆಯಲ್ಲಿ ಒಬ್ಬರೇ ಉಳಿದುಕೊಂಡಿದ್ದರು. ಸಂಜೆ ಪತ್ನಿ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ಆತಂಕಗೊಂಡು ನೆರೆ ಮನೆಯವರಲ್ಲಿ ನೋಡುವಂತೆ ಹೇಳಿದಾಗ ರವೀಂದ್ರ ಅವರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆರ್ಥಿಕ ಸಮಸ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next