Advertisement

ಬಂಟ್ವಾಳ : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ

09:24 PM Apr 04, 2021 | Team Udayavani |

ಬಂಟ್ವಾಳ: ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲು ವಳವೂರು‌ ನಿವಾಸಿ ಯುವಕನೊಬ್ಬನನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ರವಿವಾರ ಸಂಜೆ ಬಿ.ಸಿ.ರೋಡು ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ.

Advertisement

ವಳವೂರು ನಿವಾಸಿ ಮನೋಜ್ ಸಪಲ್ಯ(೩೦) ಹಲ್ಲೆಗೊಳಗಾದ ಯುವಕ. ಬೈಕಿನಲ್ಲಿ ಬಂದ ಇಬ್ಬರು ಹೆಲ್ಮೆಟ್ ಧಾರಿ ಯುವಕರು ಹಲ್ಲೆ ನಡೆಸಿ‌ ಪರಾರಿಯಾಗಿದ್ದಾರೆ.

ಗಾಯಗೊಳಗಾದ ಯುವಕನನ್ನು ಬಿ.ಸಿ.ರೋಡು ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿದ್ದು, ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಗೆ ತಿಳಿಸಿದ್ದು, ಶೀಘ್ರ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ :ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರಿಗೆ ಕೋವಿಡ್ ಪಾಸಿಟಿವ್

Advertisement

Udayavani is now on Telegram. Click here to join our channel and stay updated with the latest news.

Next