Advertisement

ಸರಕಾರಿ ಗೌರವಗಳೊಂದಿಗೆ ಕದ್ರಿ ಗೋಪಾಲನಾಥ್ ಅಂತ್ಯಕ್ರಿಯೆ

04:07 PM Oct 22, 2019 | Team Udayavani |

ಬಂಟ್ವಾಳ: ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಮೃತದೇಹದ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಬಂಟ್ವಾಳ ತಾಲೂಕಿನ ಸಜೀಪ ಮಿತ್ತಬಾಗಿಲಿನಲ್ಲಿ ನಡೆಯಿತು.

Advertisement

ಇಂದು ಬೆಳಿಗ್ಗೆ 10.15ರಿಂದ 1.45ರವರೆಗೆ ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನ ನಡೆಯಿತು. ಕಲಾವಿದರು, ಜನಪ್ರತಿನಿಧಿಗಳು, ಚೆನ್ನೈ ನಿಂದ ಬಂದಿದ್ದ ಶಿಷ್ಯರು ಅಗಲಿದ ಮಹಾನ್ ಕಲಾವಿದನ ಅಂತಿಮ ದರ್ಶನ ಮಾಡಿದರು.

ದ.ಕ.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ್ ರೈ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು. ಜೋಗಿ ಸಮಾಜದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next