Advertisement

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

05:58 PM Apr 26, 2024 | Team Udayavani |

ಬಂಟ್ವಾಳ: ಫರಂಗಿಪೇಟೆ ಸಮೀಪದ ಕುಮ್ಡೇಲಿನಲ್ಲಿ ವ್ಯಕ್ತಿಯೋರ್ವನಿಗೆ ಹಳೆದ್ವೇಷದ ಹಿನ್ನೆಲೆಯಲ್ಲಿ ಚೂರಿ ಇರಿದು‌ ಗಾಯಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.

Advertisement

ಕುಮ್ಡೇಲು ನಿವಾಸಿ ಪವನ್ ಅವರಿಗೆ ಆರೋಪಿ ಚರಣ್ ರಾಜ್ ಚೂರಿ‌‌ ಇರಿದಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡಿರುವ ಪವನ್ ಅವರು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಇವರಿಬ್ಬರ ಮಧ್ಯೆ ಹಳೆ ದ್ವೇಷ ಹಿನ್ನೆಲೆಯಲ್ಲಿ ಆಗಾಗ ಜಗಳ ನಡೆಯುತ್ತಿದ್ದು, ಶುಕ್ರವಾರ ಚರಣ್ ರಾಜ್ ಕೋಳಿ ಅಂಕಕ್ಕೆ ಬಳಸುವ ಹರಿತವಾದ ಆಯುಧದಿಂದ ಇರಿದಿದ್ದಾನೆ ಎನ್ನಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next