Advertisement

Bantwal ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

11:17 PM Jan 08, 2024 | Team Udayavani |

ಬಂಟ್ವಾಳ: ಪಶ್ಚಿಮಬಂಗಾಳ ಮೂಲದ ಕಾರ್ಮಿಕನೋರ್ವ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿ ಜುಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 7ರಂದು ಸಜೀಪನಡುವಿನಲ್ಲಿ ನಡೆದಿದೆ.

Advertisement

ಪಶ್ಚಿಮಬಂಗಾಳದ ಸುಲ್ತಾನ್‌ನಗರ ಸರ್ಯಾ ಪಾಲೆª ಕುನಿಯಾ ಪಹರ್‌ ನಿವಾಸಿ ಶಂಭುದಾಸ್‌ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಬಳಿಕ ಆ ಕೆಲಸ ಬಿಟ್ಟು ಸುಳ್ಯದಲ್ಲಿ ಶಾಮಿಯಾನ ಕೆಲಸ ಮಾಡಿಕೊಂಡಿದ್ದರು. ಅವರು ಕುಟುಂಬದ ಜತೆಗೆ ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ನೆಲೆಸಿದ್ದರು.

ಅವರ ತಾಯಿ ಹಾಗೂ ಪತ್ನಿಯ ಮಧ್ಯೆ ಪ್ರತೀದಿನ ಗಲಾಟೆ ನಡೆಯುತ್ತಿದ್ದು, ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅವರ ತಮ್ಮ ಕೇಶವದಾಸ್‌ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next