Advertisement
ನರಿಕೊಂಬು ಗ್ರಾಮದಲ್ಲಿರುವ ಪೊಯಿತಾಜೆ ಏರಮಲೆ ಶ್ರೀ ಕೋದಂಡ ರಾಮ ಭಜನಾ ಮಂದಿರದ ಮುಂಬಾಗಿಲು ಮುರಿದು ಮಂದಿರದೊಳಗೆ ಇದ್ಧ ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 3000 ಸಾವಿರ ನಗದನ್ನು ಕಳವು ಮಾಡಿದ್ದಾರೆ. ಮತ್ತು ಗೊದ್ರೇಜ್ ನ ಬಾಗಿಲು ಮುರಿದು ಅದರೊಳಗೆ ಇದ್ದ ಅಗತ್ಯವಾದ ಪತ್ರಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿ ಹೋಗಿದ್ದಾರೆ.
Related Articles
Advertisement
ಮೂರು ಪ್ರಕರಣಗಳ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಾಣೆಮಂಗಳೂರು ಮತ್ತು ಕೈಕಂಬ ಭಾಗದಲ್ಲಿ ಕಳೆದ ಒಂದು ವಾರಗಳಿಂದ ಕಳ್ಳತನ ನಡೆಯುತ್ತಿದ್ದು, ಪೋಲೀಸರ ತಲೆಕೆಡಿಸಿದೆ.ಮಳೆಗಾಲದಲ್ಲಿ ಜೋರಾಗಿ ಮಳೆ ಬರುವ ದಿನಗಳಲ್ಲಿ ಪೇಟೆ ಅಂಗಡಿಗಳ ಹಾಗೂ ಮನೆಗಳ ಕಳ್ಳತನ ಪ್ರತಿ ವರ್ಷ ವರದಿಯಾಗುತ್ತಿದೆ. ಇದೀಗ ಮತ್ತೆ ಈ ವರ್ಷದಲ್ಲಿ ಕಳ್ಳರ ಆಟ ಶುರುವಾಗಿದ್ದು, ಪೊಲೀಸರ ನಿದ್ಧೆಕೆಡಿಸಿದೆ.