Advertisement

Bantwal: ಬಿಸಿರೋಡಿನ ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ; ದಟ್ಟ ಹೋಗೆ

03:29 PM Apr 06, 2023 | Team Udayavani |

ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು. ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು.

Advertisement

ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿದ ಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.

ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು.

ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.

Advertisement

ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next