Advertisement

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

12:37 PM Oct 14, 2024 | Team Udayavani |

ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು(ಅ.14) ಬೆಳಿಗ್ಗೆ ನಡೆದಿದೆ.

Advertisement

ಬಡಕಬೈಲು ಸೈಂಟ್ ಡೊಮಿನಿಕ್‌ ಆಂಗ್ಲ ‌ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ‌ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ‌ಡಿಕ್ಕಿ‌ಹೊಡೆದಿದೆ. ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ.

ಇದನ್ನೂ ಓದಿ: Tragedy: ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Advertisement

Udayavani is now on Telegram. Click here to join our channel and stay updated with the latest news.

Next