Advertisement

Bantwal: ನದಿಯ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ

12:08 AM Jan 23, 2024 | Team Udayavani |

ಬಂಟ್ವಾಳ: ಅಯೋಧ್ಯೆಯ ನೂತನ ಮಂದಿರದಲ್ಲಿ ಸೋಮವಾರ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿಯ ನೇತ್ರಾವತಿ ನದಿಯ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.

Advertisement

ಅಯೋಧ್ಯೆ ಕರಸೇವೆಯಲ್ಲಿ 2 ಬಾರಿ ಪಾಲ್ಗೊಂಡಿರುವ ಬಂಟ್ವಾಳ ಪುರಸಭಾ ಸದಸ್ಯ ಎ. ಗೋವಿಂದ ಪ್ರಭು ನೇತೃತ್ವದಲ್ಲಿ ಪೂಜಾ ಕಾರ್ಯ ನಡೆದಿದ್ದು, ಪ್ರಸ್ತುತ ಅಯೋಧ್ಯೆಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಸರಯೂ ನದಿಯಷ್ಟೇ ಪವಿತ್ರವಾಗಿರುವ ನೇತ್ರಾವತಿಯಲ್ಲಿ ಪೂಜೆಯನ್ನು ನಡೆಸುವ ನಿರ್ಧಾರ ಕೈಗೊಂಡಿದ್ದರು.

ನದಿಯ ಮಧ್ಯೆ ಪೂಜಾ ಮಂಟಪವು ದೀಪದ ಬೆಳಕಿನಲ್ಲಿ ಕಂಗೊಳಿಸಿದ್ದು, ಅದರ ಪಕ್ಕದಲ್ಲೇ ಶ್ರೀರಾಮನ ಮೂರ್ತಿ ಇರುವ ಸ್ತಬ್ಧಚಿತ್ರವು ಭಕ್ತರ ಗಮನ ಸೆಳೆಯಿತು. ಸಾವಿರಾರು ಮಂದಿ ಪಾಲ್ಗೊಂಡಿದ್ದು, ನದಿಯ ಮಧ್ಯೆ ತೆರಳಿ ಪ್ರಸಾದ ಸ್ವೀಕರಿಸಿ ಬಳಿಕ ವಿಶೇಷ ಫಲಾಹಾರ ಸೇವಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next