Advertisement
ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ತನಿಯಪ್ಪ ಮಡಿವಾಳ ಅವರ ಪುತ್ರ ಶರತ್ ಮಂಗಳವಾರ ರಾತ್ರಿ ಬಿ.ಸಿ.ರೋಡ್ನಲ್ಲಿರುವ ತನ್ನ ಲಾಂಡ್ರಿ ಅಂಗಡಿಯನ್ನು ಬಂದ್ ಮಾಡುತ್ತಿದ್ದಾಗ ಬೈಕ್ನಲ್ಲಿ ಬಂದ ಮೂವರು ಮಾರಕಾಯುಧಗಳಿಂದ ಕಡಿದು ಚೂರಿಯಿಂದ ಇರಿದು ಪರಾರಿಯಾಗಿದ್ದರು. ತೀವ್ರ ಗಾಯಗೊಂಡ ಶರತ್ ಅವರ ಬೊಬ್ಬೆ ಕೇಳಿ ಹತ್ತಿರದಲ್ಲಿದ್ದ ಸ್ವೀಟ್ ಸ್ಟಾಲ್ ಮಾಲಕ ಪ್ರವೀಣ್ ಮಂಗಳೂರಿನ ಪೊಲೀಸ್ ಕಂಟ್ರೋಲ್ ರೂಂ ಮತ್ತು ಬಂಟ್ವಾಳ ನಗರ ಠಾಣೆಗೆ ಮಾಹಿತಿ ನೀಡಿದ್ದರು. ಅಷ್ಟರಲ್ಲಿ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಜ್ಜಿಬೆಟ್ಟು ನಿವಾಸಿ ಜಿತೇಂದ್ರ ಕೋಟ್ಯಾನ್ ಮತ್ತು ಮಿತ್ರರು ಸಮೀಪದ ಹಣ್ಣಿನಂಗಡಿಯ ಮಾಲಕ ರಿಕ್ಷಾ ಚಾಲಕ ಅಬ್ದುಲ್ ರವೂಫ್ ಅವರ ಸಹಾಯದಿಂದ ರಿಕ್ಷಾದಲ್ಲಿ ಕೂಡಲೇ ತುಂಬೆ ಆಸ್ಪತ್ರೆಗೆ ದಾಖಲಿಸಿದ್ದರು. ಅವರ ದೇಹಸ್ಥಿತಿ ಗಂಭೀರವಾಗಿದ್ದರಿಂದ ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ತಲೆ ಮತ್ತು ಕುತ್ತಿಗೆಯ ನಡುವೆ ಬಲವಾದ ಏಟು ಬಿದ್ದಿದ್ದು, ತೀವ್ರ ರಕ್ತ ಸ್ರಾವವಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯವಾದ ರಕ್ತ ಪೂರೈಸಲು ವ್ಯವಸ್ಥೆ ಮಾಡಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಕೊಠಡಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಆಸ್ಪತ್ರೆಯಲ್ಲಿದ್ದಾಗ ಅನೇಕ ಮಂದಿ ಮುಖಂಡರು ಶರತ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.
Related Articles
Advertisement
ಏಕೈಕ ಪುತ್ರ ಶರತ್ಶರತ್ ಅವರ ತಂದೆ ತನಿಯಪ್ಪ ಬಿ.ಸಿ. ರೋಡ್ನಲ್ಲಿ ಲಾಂಡ್ರಿ ಅಂಗಡಿ ನಡೆಸುತ್ತಿದ್ದು, ಹಗಲು ಹೊತ್ತು ಅವರೇ ಇರುತ್ತಿದ್ದರು. ಸಂಜೆ ಬಳಿಕ ಅವರ ಏಕೈಕ ಪುತ್ರ ಶರತ್ ವ್ಯವಹಾರ ನೋಡಿ ಕೊಳ್ಳುತ್ತಿದ್ದರು. ಮಂಗಳವಾರ ಎಂದಿನಂತೆ ರಾತ್ರಿ 9.30ಕ್ಕೆ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಶರತ್ ಮೇಲೆ ದಾಳಿ ನಡೆಸಿದ್ದರು. ಶರತ್ ಅವರು ತಂದೆ, ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಶರತ್ ಹತ್ಯೆಗೆ ಮುಸ್ಲಿಂ ಸಂಘಟನೆಗಳ ಖಂಡನೆ
ಮಂಗಳೂರು: ದುಷ್ಕರ್ಮಿಗಳು ಬಿ.ಸಿ.ರೋಡಿನಲ್ಲಿ ಶರತ್ ಎಂಬ ಯುವಕನ ಮೇಲೆ ಮರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ತಿಳಿಸಿದೆ. ಪೊಲೀಸರು ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಖಂಡನೆ
ಉಡುಪಿ: ಬಿ.ಸಿ.ರೋಡ್ನಲ್ಲಿ ನಡೆದ ಶರತ್ ಅವರ ಕೊಲೆ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ಖಂಡಿಸಿದೆ. ಸಚಿವರ ಹೇಳಿಕೆ ಖಂಡನೀಯ: ಅಂಗಾರ
ಮಂಗಳೂರು: ಬಂಟ್ವಾಳದಲ್ಲಿ ಹಿಂದೂ ಯುವಕರ ಕೊಲೆ ಯತ್ನ, ನಿರಂತರ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಎಸ್ಡಿಪಿಐ ರಾಷ್ಟ್ರದ್ರೋಹಿ ಸಂಘಟನೆ ಎನ್ನುವ ಅರಿವು ಸಚಿವರಿಗೆ ಇರಬೇಕೆಂದು ಸುಳ್ಯ ಶಾಸಕ ಎಸ್. ಅಂಗಾರ ತಿಳಿಸಿದ್ದಾರೆ. ಸಚಿವರು ಗಲಭೆಯಲ್ಲಿ ಕಾಂಗ್ರೆಸ್ ಪಾತ್ರವಿಲ್ಲ ಎನ್ನುತ್ತಿದ್ದಾರೆ. ಎಸ್ಡಿಪಿಐ ಜತೆ ಬಿಜೆಪಿ ಹೆಸರು ಸೇರಿಸಿ ಗಲಭೆಗೆ ಕಾರಣ ಎಂದು ಆರೋಪಿಸಿದ್ದಾರೆ. ಸಚಿವರ ಈ ಹೇಳಿಕೆ ಖಂಡನೀಯ. ಬಿಜೆಪಿ ರಾಷ್ಟ್ರ ಪ್ರೇಮಿಗಳ ಪಕ್ಷ. ಎಸ್ಡಿಪಿಐ ರಾಷ್ಟ್ರದ್ರೋಹಿ ಸಂಘಟನೆ ಎನ್ನುವುದು ನಾಡಿನ ಪ್ರಜ್ಞಾವಂತ ಜನರಿಗೆ ತಿಳಿದಿದೆ. ರಾಷ್ಟ್ರದ್ರೋಹಿ ಸಂಘಟನೆಗೆ ಕಾಂಗ್ರೆಸ್ ಪರೋಕ್ಷ ಬೆಂಬಲ ನೀಡುತ್ತಿದೆ. ಎಂದು ಅವರು ಪ್ರಕಟನೆಯಲ್ಲಿ ಆರೋಪಿಸಿದ್ದಾರೆ. ಶರತ್ ಕುಟುಂಬಕ್ಕೆ ನೆರವು: ಭಟ್
ಮಂಗಳೂರು: ಶರತ್ ಅವರು ಸಾವನ್ನಪ್ಪಿದ ಬಗ್ಗೆ ಡಾ| ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರತಿಕ್ರಿಯೆ ನೀಡಿ ‘ನಾವು ಉತ್ತಮ ಕಾರ್ಯಕರ್ತರನ್ನೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬಕ್ಕೆ ಸೂಕ್ತ ನೆರವು ನೀಡಲಾಗುವುದು’ ಎಂದು ತಿಳಿಸಿದ್ದಾರೆ. ನಳಿನ್ ಖಂಡನೆ
ಮಂಗಳೂರು: ಶರತ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದ ನಳಿನ್ ಕುಮಾರ್ ಅವರು ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.