Advertisement

ಬಂಟ್ವಾಳ: ಅಂಬ್ಯುಲೆನ್ಸ್ ಗೆ ಢಿಕ್ಕಿಯಾದ ಟಿಪ್ಪರ್

10:41 PM Nov 02, 2022 | Team Udayavani |

ಬಂಟ್ವಾಳ : ಟಿಪ್ಪರೊಂದು ಅಂಬ್ಯುಲೆನ್ಸ್ ಗೆ ಢಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.

Advertisement

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ‌ ಘಟನೆ ನಡೆದಿದೆ.

ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ‌ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಅಂಬ್ಯುಲೆನ್ಸ್ ವಾಹನದ ಮುಂಭಾಗದ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯನ್ನು ಬೇರೆ ಅಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಸಾಗಿಸಿದ್ಧಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next