Advertisement

ಬಂಟ್ವಾಳ: ಕೊಲೆ ಯತ್ನ ಆರೋಪಿಯ ಸೆರೆ

09:10 PM Mar 23, 2023 | Team Udayavani |

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್‌ ಯಾನೆ ನಿಸಾರ್‌ ಆಹಮ್ಮದ್‌ ಎಂಬಾತನನ್ನು ಬಂಟ್ವಾಳ ನಗರ ಠಾಣೆ ಪಿಎಸ್‌ಐ ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದೆ.

Advertisement

ಆರೋಪಿಯು ಫೆ. 18ರಂದು ಪಾಣೆಮಂಗಳೂರು ಜೈನರಪೇಟೆ ನಿವಾಸಿ ಸುಲೈಮಾನ್‌ ಅವರಿಗೆ ಕತ್ತರಿಯಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಸಾರ್‌ ಬೇರೊಂದು ಪ್ರಕರಣವೊಂದರಲ್ಲೂ ಆರೋಪಿಯಾಗಿ ಜೈಲಿಗೆ ಹೋಗಿ ಬಂದಿದ್ದ.

 

Advertisement

Udayavani is now on Telegram. Click here to join our channel and stay updated with the latest news.

Next