Advertisement

Bantwala: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು

07:57 AM Apr 21, 2024 | Team Udayavani |

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಏ. 20ರ ಶನಿವಾರ ಸಂಜೆ ವೇಳೆ ಸಂಭವಿಸಿದೆ.

Advertisement

ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.

ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು ಸುಹೈಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟ್ಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next