Advertisement

Bantwala: ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ-ಪತ್ನಿ ಸಜೀಹ ದಹನ

04:24 PM Jan 28, 2024 | Team Udayavani |

ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಕೊಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಜ.28ರ ಭಾನುವಾರ ಮಧಾಹ್ನ ವೇಳೆ ಸಂಭವಿಸಿದೆ.

Advertisement

ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(51) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು.

ಇವರ ಮನೆ ಸಮೀಪದಲ್ಲಿರುವ ಗುಡ್ಡದಲ್ಲಿರುವ ಮುಳಿಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next