ಬಂಟ್ವಾಳ: ಕಾರಿನೊಳಗೆ ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.
ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು, ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ.
ಮಾ.12 ರ ಬೆಳಿಗ್ಗೆ ಜಗದೀಶ್ ತನ್ನ ಬಾವನ ಜೊತೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಹೋಗಿ ವಾಪಾಸ್ ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಸುಮಾರು 1.30 ಗಂಟೆ ಆಗಿತ್ತು. ಆ ಸಮಯ ಜಗದೀಶ್ ತನ್ನ ಭಾವನಲ್ಲಿ, ಕಾರು ಚಲಾಯಿಸಲು ಕಷ್ಟವಾಗುತ್ತಿದೆ, ನಾನು ಮನೆಗೆ ಮತ್ತೆ ಬರುತ್ತೇನೆ, ನೀವು ಮಕ್ಕಳ ಜೊತೆ ಮನೆಗೆ ಹೋಗಿ ಎಂದು ಹೇಳಿ ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದ ಎನ್ನಲಾಗಿದೆ.
Related Articles
ಆದರೆ ರಾತ್ರಿ 7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡು ಬಂತು. ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ಕಾರಿನ ಕಿಟಕಿ, ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪಿದ್ದಾ? ಅಥವಾ ಇನ್ಯಾವದೋ ಕಾಯಿಲೆಯಿಂದ ಮೃತಪಟ್ಟಿದ್ದಾ? ಎಂಬುದು ವೈದ್ಯಕೀಯ ವರದಿ ಹಾಗೂ ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ.