Advertisement

Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ

04:24 PM Oct 10, 2024 | Team Udayavani |

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿ ಕಾರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿಸಿರೋಡಿನ ಭಂಡಾರಿ ಬೆಟ್ಟು ಎಂಬಲ್ಲಿ ಅ.10ರ ಗುರುವಾರ ನಡೆದಿದೆ.

Advertisement

ಸಿದ್ದಕಟ್ಟೆ ನಿವಾಸಿ ರಕ್ಷಿತ್ ಎಂಬವರು ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಮನೆಗೆ ತೆರಳುವ ವೇಳೆ ನಿಯಂತ್ರಣ ಕಳೆದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಕಾರು ಮತ್ತು ಬೈಕ್ ಎರಡೂ ಜಖಂಗೊಂಡಿದೆ. ಕಾರಿನ ಚಾಲಕ ರಕ್ಷಿತ್ ಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು‌, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

ಬೈಕ್ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದು ಎಂದು ಹೇಳಲಾಗಿದ್ದು, ಈತನ ಹೆಸರು ವಿಳಾಸದ ಮಾಹಿತಿ ಲಭ್ಯವಾಗಿಲ್ಲ. ಆತ ಕೂಡ ಮಂಗಳೂರಿನಿಂದ ಮತ್ತೆ ವಾಪಸ್ ಚಿಕ್ಕಮಗಳೂರು ಕಡೆಗೆ ತೆರಳುವವನಿದ್ದ. ಬೇರೆ ಕೆಲಸದ ನಿಮಿತ್ತ ಆತ ಬೈಕ್ ರಸ್ತೆ ಪಕ್ಕಕ್ಕೆನಿ ಲ್ಲಿಸಿ ಇಳಿದು ಹೋಗಿದ್ದ‌. ಹಾಗಾಗಿ ಯಾವುದೇ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.

ಆತ ಬೈಕ್ ನಲ್ಲಿ ಕುಳಿತುಕೊಂಡಿದ್ದರೆ ಜೀವಕ್ಕೆ ಅಪಾಯವಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next