Advertisement

ಬಂಟ್ವಾಳ: ಜಾನುವಾರು ಕಳವುಗೈದು ಅಕ್ರಮ ಸಾಗಾಟ ಪ್ರಕರಣ; ಮತ್ತೊಬ್ಬನ ಬಂಧನ

06:56 PM Oct 19, 2022 | Team Udayavani |

ಬಂಟ್ವಾಳ: ಜಾನುವಾರುಗಳನ್ನು ಕಳವುಗೈದು ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement

ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಬಂಧಿತ ಆರೋಪಿ.

ಬಂಟ್ವಾಳ ನಗರ ಠಾಣೆಯ ಎಸ್ಐ ಮತ್ತವರ ಸಿಬ್ಬಂದಿಗಳು ಅ.15 ರಂದು ಶನಿವಾರ ಬೆಳಗ್ಗೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಎಂಬಲ್ಲಿ ಕಳವುಗೈದ ಜಾನುವಾರುಗಳನ್ಬು ಸಾಗಾಟ ಮಾಡುತ್ತಿದ್ದ ವೇಳೆ ಪತ್ತೆ ಹಚ್ಚಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿ, ಎರಡು ಜಾನುವಾರನ್ನು ರಕ್ಷಣೆ ಮಾಡಿದ್ದರು.

ಉಳಿದಂತೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದರು.

ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ (47) ಬಂಧಿತ ಆರೋಪಿಯಾಗಿದ್ದ. ಬಿಳಿಯೂರು ಗ್ರಾಮದ ಸತ್ತಿಕಲ್ಲು ನಿವಾಸಿ ಸತ್ತಾರ್ ಹಾಗೂ ರಿಫಾಝ್ ಎಂಬವರನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದು ಇವರಿಬ್ಬರು ತಲೆಮರೆಸಿಕೊಂಡಿದ್ದರು.

Advertisement

ಇವರಲ್ಲಿ ಸತ್ತಾರ್ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ‌ನ್ಯಾಯಾಂಗ ಬಂಧನ‌ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next