Advertisement

ಬಂಟ್ವಾಳ: ರೈಲು ಢಿಕಿ ಹೊಡೆದು ವ್ಯಕ್ತಿ ಸಾವು

02:47 PM Feb 20, 2023 | Team Udayavani |

ಬಂಟ್ವಾಳ: ರೈಲ್ವೆ ಟ್ರಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ರೈಲು ಬಡಿದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಟೂರು ಎಂಬಲ್ಲಿ ಫೆ.20 ರಂದು ಸೋಮವಾರ ಮುಂಜಾನೆ ವೇಳೆ ನಡೆದಿದೆ.

Advertisement

ಬಿಜಾಪುರ ಮೂಲದ ಮಲ್ಲು ಆಧಿಮಣಿ (33) ಮೃತಪಟ್ಟ ಅವಿವಾಹಿತ ಯುವಕ.

ಬಿಜಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಈತ ಇತ್ತೀಚಿಗೆ ಮಾನಸಿಕವಾಗಿ ಖಿನ್ನತೆಯಿಂದ ಇದ್ದ ಎಂದು ಹೇಳಲಾಗಿದ್ದು, ಫೆ.17 ರಂದು ಶುಕ್ರವಾರ ಮನೆಯಲ್ಲಿ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದ ಎಂದು ಮನೆಯವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಆನಾರೋಗ್ಯದಿಂದ ಇದ್ದ ಈತ ಔಷಧ ಪಡೆಯುತ್ತಿದ್ದನು. ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಈತ ಕೂಲಿಯನ್ನು ಅರಸಿಕೊಂಡು ದ.ಕ.ಜಿಲ್ಲೆಗೆ ಬಂದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಮಂಗಳೂರು – ಬೆಂಗಳೂರು ರೈಲು ಹಳಿಯ ಅಮ್ಟೂರು ತಿರುವಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಧ್ಯರಾತ್ರಿ ರೈಲು ಡಿಕ್ಕಿ ಹೊಡೆದು ಈತನ ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗಿ ಮೃತಪಟ್ಟಿರಬೇಕು ಎಂದು ಊಹಿಸಲಾಗಿದೆ.

Advertisement

ರೈಲ್ವೆ ಟ್ರಾಕ್ ಪೆಟ್ರೋಲಿಂಗ್ ಮಾಡುವ ಸಿಬ್ಬಂದಿಗಳು ಮೃತದೇಹವನ್ನು ಗಮನಿಸಿ ಇಲಾಖೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಂಗಳೂರು ರೈಲ್ವೆ ಪೊಲೀಸ್ ಇನ್ಸ್ ಪೆಕ್ಟರ್ ಮೋಹನ್ ಹಾಗೂ ಎ.ಎಸ್ ‌ಐ.ಮದುಚಂದ್ರ ಅವರೊಂದಿಗೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿರಿಸಿ ಮನೆಯವರನ್ನು ಸಂಪರ್ಕ ಮಾಡಿದ್ದಾರೆ.

ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next