Advertisement

ಬಂಟ್ವಾಳ: ವಾಹನ ಸೈಡ್ ಕೊಡುವ ವಿಚಾರದಲ್ಲಿ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ : ಸಹೋದರರ ಬಂಧನ

09:57 PM Apr 27, 2022 | Team Udayavani |

ಬಂಟ್ವಾಳ: ವಾಹನವೊಂದಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಮನೆಮಂದಿಯ ಎದುರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಸಹೋದರಿಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

Advertisement

ಮಂಗಳೂರು ಕಣ್ಣೂರು ನಿವಾಸಿಗಳಾದ ಇಸ್ಮಾಯಿಲ್ ಯಾನೆ ಬಾತಿಶ್ ಹಾಗೂ ಯಸೀನ್ ಬಂಧಿತ ಆರೋಪಿಗಳು. ಬ್ರಹ್ಮರಕೂಟ್ಲು ಟೋಲ್ ನಲ್ಲಿ ಎರಡು ಕಾರುಗಳ ಸೈಡ್ ಕೊಡುವ ವೇಳೆ ಕಾರೊಂದರ ಸೈಡ್ ಮಿರರ್ ಗೆ ಢಿಕ್ಕಿಯಾಗಿದೆ.

ಈ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಹಲ್ಲೆ ನಡೆಸಿದ್ದಾರೆ. ಬೆಂಗಳೂರು ಮೂಲದ ನಿವಾಸಿ ಭಾಸ್ಕರ್ ಪೈ ಅವರು ಉಡುಪಿಗೆ ಕಾರ್ಯಕ್ರಮವೊಂದಕ್ಕೆ ಮನೆಮಂದಿಯ ಜೊತೆಯಲ್ಲಿ ತೆರಳಿ ಕಾರ್ಯಕ್ರಮ ಮುಗಿಸಿ ವಾಪಸು ಆಗುವ ಸಂದರ್ಭದಲ್ಲಿ ಬ್ರಹ್ಮರಕೋಟ್ಲು ಟೋಲ್ ಗೇಟ್ ನಲ್ಲಿ ಇಬ್ಬರು ಸೇರಿ ಮನೆಯವರ ಎದುರಿನಲ್ಲಿಯೇ ಮಾರಣಾಂತಿಕ ವಾಗಿ ಹಲ್ಲೆ ನಡೆಸಿ ನೆಲಕ್ಕುರಳಿಸಿ ಕಾಲಿನಿಂದ ಒದೆಯುವ ದೃಶ್ಯ ಹಾಗೂ ಮನೆಮಂದಿ ಬಿಡುವಂತೆ ಗೊಳಾಡುವ ದೃಶ್ಯ ಟೋಲ್ ಗೇಟ್ ನಲ್ಲಿರುವ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ : ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಕೈ ಕೊಡಲು ರಾಹುಲ್‌ ಪ್ರವಾಸ ಕಾರಣ?

ಭಾಸ್ಕರ್ ಪೈ ಅವರ ದೂರಿನಂತೆ ವಿಡಿಯೋ ಆಧಾರದ ಮೇಲೆ ಪೋಲೀಸರು ಕಣ್ಣೂರು ನಿವಾಸಿಗಳಾದ ಸಹೋದರರನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ವಿವೇಕಾನಂದ ಅವರ ನಿರ್ದೇಶನದಂತೆ ನಗರ ಠಾಣಾ ಪಿಎಸ್ಐ ಅವಿನಾಶ್ ಗೌಡ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next