Advertisement

ಬಂಟ್ವಾಳ : ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಸಾವು

09:28 PM Nov 07, 2021 | Team Udayavani |

ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

Advertisement

ಪೆರ್ಲಾಪು ನಿವಾಸಿ ಸುರೇಶ್ (38) ಮೃತಪಟ್ಟ ವ್ಯಕ್ತಿ.

ಸುರೇಶ್ ಎಂಬಾತ ನೆರೆ ಮನೆಯ ಕೃಷಿಕರೊಬ್ಬರ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷ್ಮಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕ ವಾಗಿ ಸುರೇಶ್ ಅವರ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಇದನ್ನೂ ಓದಿ : ಯೋಜನೆ ಜಾರಿಗೆ ಒತ್ತಾಯಿಸಿ ‘ಮೇಕೆದಾಟು’ವಿನಿಂದ ಬೆಂಗಳೂರಿಗೆ ಕಾಂಗ್ರೆಸ್ ಪಾದಯಾತ್ರೆ

Advertisement

Udayavani is now on Telegram. Click here to join our channel and stay updated with the latest news.

Next