Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

01:25 AM Mar 02, 2023 | Team Udayavani |

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ನಗರ ಪೊಲೀಸರು ನೆಲ್ಯಾಡಿ ಸಮೀಪದ ಶಿಬಾಜೆಯಲ್ಲಿ ಬಂಧಿಸಿದ್ದಾರೆ.

Advertisement

ಉಜಿರೆ ಹಳೆಪೇಟೆ ನಿವಾಸಿ ಮಣಿ ಯಾನೆ ಮಣಿಕಂಠ (41) ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದು, ಪ್ರಸ್ತುತ ಆತ ಕುಂಬ್ಳೆಯ ನೀರ್ಜಾಲಿನಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಕುರಿತು ಖಚಿತ ಮಾಹಿತಿ ಪಡೆದ ನಗರ ಠಾಣಾ ವಾರಂಟ್‌ ಸಿಬಂದಿ ಹೆಡ್‌ ಕಾನ್‌ಸ್ಟೆಬಲ್ ಗಣೇಶ್‌, ಕ್ರೈಂ ಸಿಬಂದಿ ಹೆಡ್‌ ಕಾನ್‌ಸ್ಟೆಬಲ್ ರಾಜೇಶ್‌, ಪ್ರವೀಣ್‌ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next