Advertisement

ಬಂಟ್ವಾಳ : ರೈಲ್ವೇ ಹಳಿಯಲ್ಲಿ ಪತ್ತೆಯಾದ ಮೃತ ದೇಹದ ಗುರುತು ಪತ್ತೆ

07:48 PM Jan 11, 2022 | Team Udayavani |

ಬಂಟ್ವಾಳ: ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲೇ ರೈಲ್ವೇ ಹಳಿಯಲ್ಲಿ ಜ. 10 ರ ರಾತ್ರಿ ವ್ಯಕ್ತಿಯೊಬ್ಬರ ಮೃತದೇಹವೊಂದು ಪತ್ತೆಯಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿದೆ.

Advertisement

ಸಿದ್ದಕಟ್ಟೆ ನಿವಾಸಿ ಜಿನ್ನಪ್ಪ ನಾಯ್ಕ(71) ಮೃತ ವ್ಯಕ್ತಿ. ಅವರು ಕಳೆದ 10 ವರ್ಷಗಳಿಂದ ಮಂಡಿನೋವು ಸಮಸ್ಯೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದೆ.

ದೂರದೂರುಗಳಿಗೆ ತೆರಳುವ ಸಂದರ್ಭದಲ್ಲಿ ಅವರು ರೈಲಿನ ಮೂಲಕ ತೆರಳುತ್ತಿದ್ದು, ಹೀಗಾಗಿ ಹೆಚ್ಚಾಗಿ ರೈಲ್ವೇ ನಿಲ್ದಾಣಕ್ಕೆ ಆಗಮಿಸುತ್ತಿದ್ದರು ಎನ್ನಲಾಗಿದೆ. ಜ.೧೦ರ ರಾತ್ರಿ ೮ರ ಸುಮಾರಿಗೆ ಅವರು ಗೂಡ್ಸ್ ರೈಲಿಗೆ ತಲೆಕೊಟ್ಟಿದ್ದು, ರುಂಡ ಹಾಗೂ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪಣಂಬೂರು :ಸೀ ಫುಡ್‌ ಫ್ಯಾಕ್ಟರಿಯಲ್ಲಿ ಅಮೋನಿಯ ಸೋರಿಕೆ 26ಮಂದಿ ಆಸ್ವಸ್ಥ, ಆಸ್ಪತ್ರೆಗೆ ದಾಖಲು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next