Advertisement

Bantwala: ಅಪರಿಚಿತ ವ್ಯಕ್ತಿ ಸಾವು: ಗುರುತು ಪತ್ತೆಗೆ ಮನವಿ

12:15 AM Aug 05, 2024 | Team Udayavani |

ಬಂಟ್ವಾಳ: ಬಿ.ಸಿ. ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ನರಳುತ್ತಿದ್ದು, ಬಳಿಕ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇದೀಗ ಮೃತದೇಹದ ಗುರುತು ಪತ್ತೆಗಾಗಿ ಬಂಟ್ವಾಳ ಪೊಲೀಸರು ಮನವಿ ಮಾಡಿದ್ದಾರೆ.

Advertisement

ಮೃತ ವ್ಯಕ್ತಿಯ ವಯಸ್ಸು 50ರಿಂದ 55 ಎಂದು ಅಂದಾಜಿಸಲಾಗಿದ್ದು, ಆತನ ಹೆಸರು ಪ್ರಕಾಶ ಎಂದು ತಿಳಿದುಬಂದಿದೆ. ಈ ವ್ಯಕ್ತಿಯು ಅಸೌಖ್ಯದಿಂದ ನರಳುತ್ತಿರುವ ಕುರಿತು ಆ. 1ರಂದು ಪೊಲೀಸರಿಗೆ ಬಂದ ಮಾಹಿತಿಯ ಆಧಾರದಲ್ಲಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವ್ಯಕ್ತಿಯು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಗುರುತು ಪತ್ತೆಯಾದಲ್ಲಿ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ದೂರವಾಣಿ ಸಂಖ್ಯೆ 08255-232111, 9480805367 ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next