Advertisement

ಬಂಟ್ವಾಳ: ಕಾರು- ಸ್ಕೂಟರ್‌ ಅಪಘಾತ; ಚಿಕಿತ್ಸೆ ಫಲಿಸದೆ ಸ್ಕೂಟರ್‌ ಸವಾರ ಸಾವು

12:07 PM Feb 28, 2023 | Team Udayavani |

ಬಂಟ್ವಾಳ: ಫೆ.27 ರ ಸಂಜೆ ನಡೆದ ಕಾರು- ಸ್ಕೂಟರ್‌ ಅಪಘಾತದಲ್ಲಿ ಸ್ಕೂಟರ್‌ ಸವಾರ ಗಾಯಗೊಂಡು ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಕೂಟರ್‌ ಸವಾರ ತಿಮ್ಮಪ್ಪ ಮೃತಪಟ್ಟ ವ್ಯಕ್ತಿ.
ಘಟನೆಯ ವಿವರ: ಕಾರು ಓವರ್‌ ಟೇಕ್‌ ಮಾಡಲು ಹೋಗಿ ಅದೇ ಮಾರ್ಗದಲ್ಲಿ ಬರುತ್ತಿದ್ದ ಸ್ಕೂಟರ್ ನ ಬಲ ಬದಿಯ ಹ್ಯಾಂಡಲ್ ಗೆ ಕಾರಿನ ಎಡ ಬದಿ ತಾಗಿ ಅಪಘಾತವಾದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಗ್ರಾಮದ ರಾಮಲಕಟ್ಟೆ ಎಂಬಲ್ಲಿ ಫೆ. 27 ರಂದು ನಡೆದಿತ್ತು.
ಅಪಘಾತದ ಪರಿಣಾಮ ತಿಮ್ಮಪ್ಪ ಅವರು ರಸ್ತೆಗೆ ಎಸೆಯಲ್ಪಟ್ಟು ಬಿದ್ದು ಗಾಯಗೊಂಡಿದ್ದರು. ಆ ನಂತರ ಸಾರ್ವಜನಿಕರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಕಾರು ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನ ಅಪಘಾತಕ್ಕೆ ಕಾರನ ಎನ್ನಲಾಗುತ್ತಿದೆ. ಈ ಬಗ್ಗೆ ಸೀತಾರಾಮ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next