Advertisement

ಎ‌ಟಿಎಂನಲ್ಲೇ ಬಾಕಿಯಾಗಿದ್ದ ನಗದನ್ನು ಹಿಂತಿರುಗಿಸಿ ಮಾನವಿಯತೆ ಮೆರೆದ ಕಂದಾಯ ಇಲಾಖೆಯ ಅಧಿಕಾರಿ

03:34 PM Mar 02, 2023 | Team Udayavani |

ಬಂಟ್ವಾಳ: ಎ.ಟಿ.ಎಂ.ನಲ್ಲಿ ಬಾಕಿಯಾಗಿದ್ದ ಹಣವನ್ನು ಪೊಲೀಸ್ ಇಲಾಖೆಯ ಸಹಕಾರದಿಂದ ಪತ್ತೆ ಹಚ್ಚಿ ವಾರೀಸುದಾರರಿಗೆ  ನೀಡಿ ಮಾನವೀಯತೆ ಮೆರೆದ ಘಟನೆ ಬಂಟ್ವಾಳದಲ್ಲಿನಡೆದಿದೆ.

Advertisement

ಬಂಟ್ವಾಳ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಸೀತಾರಾಮ ಮಾನವೀಯತೆ ಮೆರೆದ ಅಧಿಕಾರಿ.

ಬಂಟ್ವಾಳ ತಾಲೂಕು ಕಚೇರಿಯ ನಿವೃತ್ತ ಸಿಬ್ಬಂದಿ ಮುಕ್ತಬಾಯಿ ಎಂಬವರು ಹಣ ಕಳೆದುಕೊಂಡಿದ್ದರು.

ಫೆ. 27 ರಂದು ಬಿಸಿರೋಡಿನ ಕೆನರಾ ಬ್ಯಾಂಕ್ ಎ.ಟಿ.ಎಂ.ನಲ್ಲಿ ದೊರೆತ ರೂ.9000 ನಗದನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಇಂದು(ಮಾ.2) ವಾರೀಸುದಾರರಿಗೆ ಪೋಲೀಸರ ಸಮಕ್ಷಮದಲ್ಲಿ ನೀಡಲಾಯಿತು.

 ಏನಾಗಿತ್ತು?

Advertisement

ಫೆ. 27 ರಂದು ಬಿಸಿರೋಡಿನ ಕೆನರಾ ಬ್ಯಾಂಕ್ ಎ.ಟಿ.ಎಂ ನಲ್ಲಿ ಹಣ ಡ್ರಾ ಮಾಡಲೆಂದು ತೆರಳಿದ್ದ ತಾಲೂಕು ಕಚೇರಿ ಸಿಬ್ಬಂದಿ ಸೀತಾರಾಮ ಅವರು ಎ‌ಟಿಎಂನಲ್ಲೇ ಬಾಕಿಯಾಗಿದ್ದ 9000 ನಗದು ಹಣವನ್ನು ಬಂಟ್ವಾಳ ‌ನಗರ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು, ಬಂಟ್ವಾಳ ಪೊಲೀಸರು ಕೆನರಾ ಬ್ಯಾಂಕ್ ಸಹಾಯ ಪಡೆದು ವಾರೀಸುದಾರನ್ನು ಪತ್ತೆ ಮಾಡಿದಾಗ ಮುಕ್ತಬಾಯಿ ಎಂದು ತಿಳಿದು ಅವರನ್ನು ಠಾಣೆಗೆ ಕರೆದು ಇಂದು ಮಾ. 2 ರಂದು ಹಸ್ತಾಂತರ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next