Advertisement

ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಮರದಿಂದ ಬಿದ್ದು ಮೃತ್ಯು

11:44 AM Jan 01, 2023 | Team Udayavani |

ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಾವೂರ ಎಂಬಲ್ಲಿ ಡಿ.31 ರಂದು ನಡೆದಿದೆ.

Advertisement

ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.

ಸುರೇಶ್ ಅವರು ಹಲವಾರು ವರ್ಷಗಳಿಂದ ತೆಂಗಿನಕಾಯಿ, ಅಡಿಕೆ ಮರದಿಂದ ಕಾಯಿ ಕೀಳುವ ಕೂಲಿ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳುವ ಕೂಲಿಗಾಗಿ ಅದೇ ಊರಿನ ಒಂದು ಮನೆಗೆ ಹೋಗಿದ್ದರು. ತೋಟದಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ರಾತ್ರಿ ಸುಮಾರು 10.30 ರ ವೇಳೆ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದರು.

ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕೆರದುಕೊಂಡು ಹೋಗಿ, ಅಲ್ಲಿನ ವೈದ್ಯರು ಪರೀಕ್ಷಿಸಿ ಗಂಭೀರ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಹೋಗಲು ಸೂಚಿಸಿದರು.

ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಆತ ಮೃತಪಟ್ಟಿರುವ ಬಗ್ಗೆ ವೈದ್ಯರು ಪರೀಕ್ಷೆ ನಡೆಸಿ ತಿಳಿಸಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ‌ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next