Advertisement

ಬಂಟ್ವಾಳ: ಪರೀಕ್ಷೆ ತಯಾರಿಯಲ್ಲಿದ್ದ ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

05:32 PM Mar 09, 2023 | Team Udayavani |

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲದಲ್ಲಿ ನಡೆದಿದೆ.

Advertisement

ಬಾಳ್ತಿಲ ನಿವಾಸಿ ಶಿಕ್ಷಕರಾದ ಚಂದ್ರಶೇಖರ ಮತ್ತು ಸೌಮ್ಯ ಅವರ ಪುತ್ರಿ ವೈಷ್ಣವಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನಾಳೆಯಿಂದ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ವೈಷ್ಣವಿ ಮನೆಯಲ್ಲಿ ಪರೀಕ್ಷೆ ತಯಾರಿಯಲ್ಲಿದ್ದಳು.

ಹಾಗಾಗಿ ಮಗಳು ಓದುತ್ತಿದ್ದಾಳಾ ಎಂದು ತಾಯಿ ಸೌಮ್ಯ ಅವರು ನೆರೆ ಮನೆಯವರಲ್ಲಿ ವಿಚಾರಿಸಲು ಪೋನ್ ಮಾಡಿದಾಗ ಮನೆ ಬಾಗಿಲು ಹಾಕಲಾಗಿತ್ತು. ನೆರೆಮನೆಯವರು ಮನೆಗೆ ಹೋಗಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದಿದೆ.

ಕಳೆದ ಕೆಲವು ದಿನಗಳಿಂದ ಇವಳು ಖಿನ್ನತೆ ಗೊಳಗಾಗಿದ್ದಳು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆ ಗೆ ಚಿಕಿತ್ಸೆ ನೀಡಲಾಗಿತ್ತು ಎಂದು ಹೇಳಲಾಗಿದೆ.

ಕಾಲೇಜಿನಲ್ಲಿ ಪ್ರಥಮ
ವೈಷ್ಣವಿ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಯಾಗಿದ್ದು, ಕಲಿಕೆಯಲ್ಲಿ ಕ್ಲಾಸಿನಲ್ಲಿ ಪ್ರಥಮವಾಗಿದ್ದಳು.

Advertisement

ಇದನ್ನೂ ಓದಿ: ಕರಾವಳಿ ಕಣ ಚಿತ್ರಣ-BSY ಹೇಳಿಕೆ ಕಂಪನ ಯಾರ ಟೀ ಕಪ್‌ನಲ್ಲಿ ಬದಲಾವಣೆ ಬಿರುಗಾಳಿ ?

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next