Advertisement

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯ ರಕ್ಷಣೆ

06:00 PM Aug 09, 2022 | Team Udayavani |

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.

Advertisement

ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದಿದ್ದ ವಿದ್ಯಾರ್ಥಿ.

ಸ್ಥಳೀಯ  ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ, ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಆರ್ ಜೆಡಿ ಜತೆ ಸಖ್ಯ- ನಿತೀಶ್ ಬಿಹಾರದ ಜನತೆಗೆ ದ್ರೋಹ ಎಸಗಿದ್ದಾರೆ: ಬಿಜೆಪಿ ಆಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next