Advertisement

ಬಂಟ್ವಾಳ: ಪಾದಚಾರಿ ಸಾವಿಗೆ ಕಾರಣನಾಗಿ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

10:00 PM Oct 09, 2022 | Team Udayavani |

ಬಂಟ್ವಾಳ: ಪಾದಚಾರಿಗೆ ಢಿಕ್ಕಿ ಹೊಡೆದು ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಟ್ರಾಫಿಕ್ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

ತಮಿಳುನಾಡು ಮೂಲದ ಪೆರಂಬದೂರು ಜಿಲ್ಲೆಯ ವೇಪನ್ ತಾಲೂಕಿನ ಪೆರಿಯಾ ವಡಗರೈ ನಿವಾಸಿ ಸೆಲ್ವರಾಜ್ (44) ಎಂಬಾತನ ನ್ನು ಆಂಧ್ರಪ್ರದೇಶದದ ಕಡಪ ಎಂಬಲ್ಲಿ ಪೋಲಿಸರು ಬಂಧಿಸಿದ್ದಾರೆ.

ಆರೋಪಿ ಸೇಲ್ವರಾಜ್ 2017 ರಲ್ಲಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಬಿಸಿರೋಡು ಕೈಕಂಬದ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಸೆಲ್ವರಾಜ್ ಚಲಾಯಿಸುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದ.

ಆರೋಪಿ ಯನ್ನು ಟ್ರಾಫಿಕ್ ಎಸ್ಐ ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬಂದಿ ಗಳಾದ ದೇವದಾಸ್ ಹಾಗೂ ರಾಜು ಅವರು ಅಂಧ್ರ ಪ್ರದೇಶದಿಂದ ಬಂಧಿಸಿ ಕರೆ ತಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next