Advertisement

Baradi Kambala: 3 ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಕೃತಿಕ್ ಗೌಡ; ಇಲ್ಲಿದೆ ಫಲಿತಾಂಶ ಪಟ್ಟಿ

08:56 AM Dec 11, 2023 | Team Udayavani |

ಕಾರ್ಕಳ: ಜಿಲ್ಲಾ ಕಂಬಳ ಸಮಿತಿಯಡಿಯಲ್ಲಿ ನಡೆಯುವ ಈ ಋತುವಿನ ಮೂರನೇ ಕಂಬಳ ಕೂಟವು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಾರಾಡಿ ಬೀಡುವಿನಲ್ಲಿ ನಡೆಯಿತು. 37ನೇ ವರ್ಷದ ಬಾರಾಡಿಬೀಡು ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ ಕೂಟದಲ್ಲಿ ಯುವ ಓಟಗಾರ ಪೆಂರ್ಗಾಲು ಕೃತಿಕ್ ಗೌಡ ಅವರು ಮೂರು ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಮಿಂಚಿದರು.

Advertisement

ಬೆಂಗಳೂರು ಕಂಬಳದಲ್ಲಿ ನೂರು ಮೀಟರ್ ಓಟವನ್ನು 9.9 ಸೆಕೆಂಡ್ ನಲ್ಲಿ ಓಡಿ ಕೂಟ ದಾಖಲೆ ಬರೆದಿದ್ದ ಕೃತಿಕ್, ಬಾರಾಡಿ ಕಂಬಳದಲ್ಲಿ ಎರಡು ಪ್ರಥಮ ಮತ್ತು ಒಂದು ದ್ವಿತೀಯ ಪ್ರಶಸ್ತಿ ಪಡೆದರು. ನೇಗಿಲು ಹಿರಿಯ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ, ಹಗ್ಗ ಹಿರಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು.

ಬಾರಾಡಿ ಬೀಡು ಕಂಬಳವು 208 ಜೊತೆ ಕೋಣಗಳ ಸ್ಪರ್ಧೆಗೆ ಸಾಕ್ಷಿಯಾಯಿತು. ಕನೆಹಲಗೆ ವಿಭಾಗದಲ್ಲಿ ನಾಲ್ಕು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಮೂರು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 20 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 35 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 36 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 110 ಜೊತೆ ಕೋಣಗಳು ಭಾಗವಹಿಸಿದ್ದವು.

ಬಾರಾಡಿ ಬೀಡು ಕಂಬಳ 2023 ಫಲಿತಾಂಶ

ಕನೆಹಲಗೆ: (ಸಮಾನ ಬಹುಮಾನ)

Advertisement

ನೇರಳೆಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ

ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮೆಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ನಿಡ್ಡೋಡಿ ಕಾನ ರಾಮ ಸುವರ್ಣ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಪೆರಿಯಾವು ಗುತ್ತು ಪ್ರಜ್ವಲ್ ಗಟ್ಟಿಯಾಳ್

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಎ”

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ

ಓಡಿಸಿದವರು: ನತೀಶ್ ಬಾರಾಡಿ

ಹಗ್ಗ ಕಿರಿಯ

ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ ವಿ ಕೋಟ್ಯಾನ್

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಕುದ್ರಿಪದವು ಭಂಡಾರಮನೆ ಪ್ರೇಮ ಶೀನ ಗುರಿಕಾರ “ಎ”

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಹಿರಿಯ

ಪ್ರಥಮ: ಶ್ರೀ ವಿಷ್ಣುಮೂರ್ತಿ ದೇವತಾ ಬಿಳಿಯೂರು ಮೇಗಿನಮನೆ ದಿವಾಕರ ಗಣಪ ಭಂಡಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ

ಪ್ರಥಮ: ಜೈ ತುಳುನಾಡ್ ಕಕ್ಕೆಪದವು ಪುನ್ಕೆದಡಿ ರಾಮಯ್ಯ ಭಂಡಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಮಿಯಾರ್ ಬೋರ್ಕಟ್ಟೆ ಅನುಗ್ರಹ ಪ್ರಥಮ್ ಪ್ರಭಾಕರ ಶೆಟ್ಟಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

Advertisement

Udayavani is now on Telegram. Click here to join our channel and stay updated with the latest news.

Next