Advertisement

Tragedy: ಕೊಡಲಿಯಿಂದ ಕೊಚ್ಚಿ 2 ಮಕ್ಕಳ ಹತ್ಯೆ ಮಾಡಿದ ಕ್ಷೌರಿಕ ಎನ್​ಕೌಂಟರ್​ನಲ್ಲಿ ಮೃತ್ಯು

08:39 AM Mar 20, 2024 | Team Udayavani |

ಬದೌನ್‌: ಉ.ಪ್ರ.ದ ಬದೌನ್‌ನಲ್ಲಿ ಕ್ಷೌರಿಕನೊಬ್ಬ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯಲ್ಲಿ 3ನೇ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಘಟನೆಗೆ ಕಾರಣನಾದ ವ್ಯಕ್ತಿಗಳ ಪೈಕಿ ಒಬ್ಬನನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿದ್ದಾರೆ. ಕೆಲವು ದಿನಗಳ ಹಿಂದೆಯೇ ಬದೌನ್‌ನಲ್ಲಿ ಅಂಗಡಿಯೊಂದನ್ನು ಸ್ಥಾಪಿಸಿದ್ದ ವ್ಯಕ್ತಿ ಮತ್ತು ಆತನ ನಿಕಟವರ್ತಿ ಮೂವರು ಮಕ್ಕಳು ಇರುವ ಮನೆಗೆ ಕೊಡಲಿ ಹಿಡಿದು ನುಗ್ಗಿದ್ದ. ಮಾತ್ರವಲ್ಲದೆ ಆಯುಷ್‌, ಅಹಾನ್‌ ಮತ್ತು ಯುವರಾಜ್‌ ಎಂಬ ಮಕ್ಕಳನ್ನು ಕಡಿದಿದ್ದ. ತೀವ್ರವಾಗಿ ಗಾಯಗೊಂಡಿದ್ದ ಆಯುಷ್‌, ಅಹಾನ್‌ ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ಕೃತ್ಯವೆಸಗಿದ ಬಳಿಕ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಪೈಕಿ ಸಾಜಿದ್‌ (23) ಎಂಬಾತ ಪೊಲೀಸರತ್ತ ಗುಂಡು ಹಾರಿಸಿದ್ದು, ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದಾಗ ಆತ ಅಸುನೀಗಿದ್ದಾನೆ.

ಇದನ್ನೂ ಓದಿ: 2 ಪ್ರತ್ಯೇಕ ಎನ್‌ಕೌಂಟರ್‌: 6 ನಕ್ಸಲರ ಹತ್ಯೆ, ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲಿ ಕಾರ್ಯಾಚರಣೆ

Advertisement

Udayavani is now on Telegram. Click here to join our channel and stay updated with the latest news.

Next