Advertisement

ಉತ್ತರ ಪ್ರದೇಶದಲ್ಲಿ ಭೀಕರ ಬಸ್ಸು ಅವಘಡ : 6 ಸಾವು, 24 ಮಂದಿಗೆ ಗಾಯ

12:23 PM Jan 10, 2017 | Team Udayavani |

ಬರೇಲಿ, ಉತ್ತರ ಪ್ರದೇಶ : ಪಶ್ಚಿಮ ಫ‌ತೇಗಂಜ್‌ ಪ್ರದೇಶದಲ್ಲಿಂದು ಬೆಳಗ್ಗೆ  ಚಾಲಕನ ನಿಯಂತ್ರಣ ಕಳೆದುಕೊಂಡ ರಾಜ್ಯ ಸಾರಿಗೆ ಬಸ್ಸು, ನಿಂತಿದ್ದ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಇತರ 24 ಮಂದಿ ಗಾಯಗೊಂಡ ದುರ್ಘ‌ಟನೆ ಸಂಭವಿಸಿದೆ.

Advertisement

ನ್ಯಾಶನಲ್‌ ಹೈವೇ 24ರಲ್ಲಿ ಇಂದು ಬೆಳಗ್ಗೆ ದಿಲ್ಲಿಯಿಂದ ಲಕ್ನೋಗೆ ಬರುತ್ತಿದ್ದ ರಾಜ್ಯ ಸಾರಿಗೆ ಬಸ್ಸು ತಾಂತ್ರಿಕ ಸಮಸ್ಯೆಗೆ ಗುರಿಯಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ನಿಂತುಕೊಂಡಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next