Advertisement

ವಾಯುಭಾರ ಕುಸಿತ: ಕೆಲವೆಡೆ ತುಂತುರು ಮಳೆ

06:20 AM Nov 23, 2018 | Team Udayavani |

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೊರೆಯುವ ಚಳಿಯ ಅನುಭವವಾಗುತ್ತಿದೆ.

Advertisement

ತಮಿಳುನಾಡು ಹಾಗೂ ಪುದುಚೇರಿಯ ಮೇಲೆ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿರುವುದರಿಂದ ಉತ್ತಮ ಮಳೆಯಾಗುತ್ತಿದೆ. ಜತೆಗೆ ರಾಜ್ಯ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿಯೂ ಮಳೆಯಾಗಿದ್ದು, ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಜತೆಗೆ ಚದುರಿದಂತೆ ತುಂತುರು ಮಳೆಯಾಗುತ್ತಿದೆ.

ಮೋಡ ಕವಿದ ವಾತಾವರಣವಿರುವುದರಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಭಾಗಗಳಲ್ಲಿ ಕೊರೆಯುವ ಚಳಿಯ ಅನುಭವವಾಗುತ್ತಿದೆ. ಸಾಮಾನ್ಯವಾಗಿ ಶುಭ್ರ ಆಕಾಶವಿದ್ದಾಗ ತಾಪಮಾನ ಕೆಳಕ್ಕೆ ಇಳಿಯುತ್ತದೆ. ಆದರೆ, ಮೋಡ ಕವಿದ ವಾತಾವರಣ ಮುಂದುವರಿದ ಪರಿಣಾಮ ಕನಿಷ್ಠ ತಾಪಮಾನ ಶೀಘ್ರ ಕೆಳಕ್ಕಿಳಿದು ಚಳಿ ಶುರುವಾಗಿದೆ.

ವಾಯುಭಾರ ಕುಸಿತದ ಪ್ರಭಾವ ರಾಜ್ಯದ ಮೇಲೆ ಇನ್ನೂ ಎರಡು ಮೂರು ದಿನಗಳು ಇರಲಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ. ನ.25ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೋಡ ಕವಿದ ವಾತಾವರಣದಿಂದಾಗಿ ಆಗುಂಬೆಯಲ್ಲಿ ಕನಿಷ್ಠ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದರೊಂದಿಗೆ ಮೈಸೂರಿನಲ್ಲಿ 14.1 ಹಾಗೂ ಬೀದರ್‌ನಲ್ಲಿ 14.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next