Advertisement

ಬ್ಯಾರಿ ಅಕಾಡೆಮಿ ಅಧ್ಯಕ್ಷರ ಅಧಿಕಾರ ಸ್ವೀಕಾರ 

12:43 PM Nov 20, 2017 | |

ಅತ್ತಾವರ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನಾಲ್ಕನೇ ಅವಧಿಯ ಅಧ್ಯಕ್ಷರಾಗಿ ಕರಂಬಾರು ಮಹಮ್ಮದ್‌ ಅವರು ಶುಕ್ರವಾರ ಅಕಾಡೆಮಿಯ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

Advertisement

ತಮ್ಮನ್ನು ಆಯ್ಕೆ ಮಾಡಿದ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮುಂದಿನ ತಮ್ಮ ಅಧಿಕಾರ ಅವಧಿಯಲ್ಲಿ ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಅವರು ಹೇಳಿದರು.

ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಬಿ. ಅಬ್ದುಲ್‌ ರೆಹಮಾನ್‌, ಬಿ.ಎ. ಮಹಮ್ಮದ್‌ ಹನೀಫ್‌, ಕರ್ನಾಟಕ ರಾಜ್ಯ ಆಹಾರ ನಿಗಮದ ನಿರ್ದೇಶಕ ಬಿ.ಎ. ಮಹಮ್ಮದ್‌ ಅಲಿ ಕಮ್ಮರಡಿ ಶುಭ ಹಾರೈಸಿದರು. ನೂತನ ಸದಸ್ಯರನ್ನು ಅಧ್ಯಕ್ಷರು ಅಭಿನಂದಿಸಿದರು. ರಿಜಿಸ್ಟ್ರಾರ್‌ ಚಂದ್ರಹಾಸ ರೈ ಬಿ. ಸ್ವಾಗತಿಸಿ, ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next