Advertisement

ದ್ವೇಷ ಭಾಷಣ, ವೈಯಕ್ತಿಕ ನಿಂದನೆ: ಬಸನಗೌಡ ಪಾಟೀಲ್ ಯತ್ನಾಳ್‌ಗೆ ಶೋಕಾಸ್ ನೋಟಿಸ್

08:52 PM May 03, 2023 | Team Udayavani |

ಕೊಪ್ಪಳ: ಕೇಂದ್ರ ಮಾಜಿ ಸಚಿವ, ವಿಜಯಪುರ ಶಾಸಕ ಹಾಗೂ ಬಿಜೆಪಿಯ ಸ್ಟಾರ್ ಪ್ರಚಾರಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳು ದ್ವೇಷಮಯ ಭಾಷಣ, ವಯಕ್ತಿಕ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ.

Advertisement

ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಈಚೆಗೆ ಯಲಬುರ್ಗಾದಲ್ಲಿ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಅವರ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಭಾಷಣ ಮಾಡುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷ ಸರ್ಪ ಎಂದೆಲ್ಲಾ ಹೇಳಿದ್ದಾರೆ. ಹಾಗಾದರೆ, ಸೋನಿಯಾ ಗಾಂಧಿ ಏನು ವಿಷ ಕನ್ಯೆನಾ ? ಎಂದು ಸಂಬೋಧಿಸಿದ್ದರು. ಈ ವಿಷಯವು ಎಲ್ಲೆಡೆ ಸದ್ದು ಮಾಡಿತ್ತು. ಪರ – ವಿರೋಧದ ಟೀಕೆಗಳು ವ್ಯಕ್ತವಾಗಿದ್ದವು. ಈ ಬೆನ್ನಲ್ಲೇ ಜಿಲ್ಲಾ ಚುನಾವಣಾಧಿಕಾರಿ ಸುಂದರೇಶ ಬಾಬು ಅವರು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ದ್ವೇಷಮಯ ಹಾಗೂ ವೈಯಕ್ತಿಕ ನಿಂದನೆ ಮಾಡುವುದು ಚುನಾವಣಾ ನಿಯಮದ ವಿರುದ್ದವಾಗಿದೆ. ಈ ಕೂಡಲೇ ನೀವು ಮೇ. 04ರ ಒಳಗಾಗಿ ಶೋಕಾಸ್ ನೋಟಿಸ್‌ಗೆ ಉತ್ತರ ಕೊಡಬೇಕು. ಇಲ್ಲದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಇದನ್ನೂ ಓದಿ: Karnataka Election; ಕಚೇರಿಯಲ್ಲಿನ ಮೋದಿ ಮತ್ತು ಶಾ ಫೋಟೋ ತೆಗೆಯುವುದಿಲ್ಲ: ಶೆಟ್ಟರ್

Advertisement

Udayavani is now on Telegram. Click here to join our channel and stay updated with the latest news.

Next