Advertisement

ಸಿ.ಸಿ ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ: ಯತ್ನಾಳ

10:08 AM Jan 27, 2020 | Team Udayavani |

ವಿಜಯಪುರ: ನಾನು ಸಚಿವ ಸ್ಥಾನದ ಅಕಾಂಕ್ಷಿಯಲ್ಲ, ಸಿ.ಸಿ ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ. ಆದರೆ ಕೆಲವು ಸಚಿವರು ವಿಧಾನಸೌಧಕ್ಕೆ ಸೀಮಿತವಾಗಿದ್ದು, ಗನ್ ಮ್ಯಾನ್, ಕೆಂಪು ದೀಪದ ಕಾರಿನಲ್ಲಿ ಓಡಾಡಲು ಸಚಿವರಾಗಬೇಕಿಲ್ಲ. ಒಂದೊಮ್ಮೆ ಪಕ್ಷ ನನಗೆ ಅಧಿಕಾರ ನೀಡಬಯಸಿದರೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಲಿ, ಇಲ್ಲವಾದಲ್ಲಿ ನಾನು ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

Advertisement

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಪ್ರತೀ ಮೂರು ತಿಂಗಳಿಗೆ ಒಮ್ಮೆ ಸಚಿವರ ಪ್ರಗತಿ ಪರಿಶೀಲನೆ ಮಾಡಬೇಕು ಎಂದರು.

ವಿದೇಶ ಪ್ರವಾಸದಿಂದ ಮರಳಿರುವ‌ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಶುಭಕೋರಿದ್ದು, ನನ್ನ ಕೋರಿಕೆ ಮೇರೆಗೆ 15 ದಿನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿಜಯಪುರಕ್ಕೆ ಬರಲಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು. ನಾನು ಸಚಿವ ಸ್ಥಾನದ ಅಕಾಂಕ್ಷಿಯಲ್ಲ. ರಾಜೀನಾಮೆ ನೀಡಿ ಬಿಜೆಪಿ ಸೇರಿರುವ 17 ಜನರಲ್ಲಿ ಕೆಲವರಿಗೆ ಡಿಸಿಎಂ, ಸಚಿವ ಸ್ಥಾನ, ನಿಗಮ ಮಂಡಳಿ ಸ್ಥಾನಮಾನ ನೀಡಲು ಮಾತುಕತೆಯಾಗಿದೆ. ಆ ರೀತಿ ಆಗುವ ವಿಶ್ವಾಸವಿದೆ. ರಮೇಶ ಜಾರಕಿಹೊಳಿ ಅವರಿಗೆ ಡಿಸಿಎಂ ನೀಡಬೇಕು ಎಂಬುದು ಸಹಜ ಬಯಕೆ. ಬಹಳ ಲಾಭ ಅನುಭವಿಸಿರುವ ಕೆಲವರು ತ್ಯಾಗ ಮಾಡಬೇಕು ಎಂದರು.

ಕೇವಲ ಭಾಷಣ ಮಾಡಿದರೆ ಸಾಲದು. ರಾಜ್ಯದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದರು ಸಮ್ಮ ಸಚಿವ ಸ್ಥಾನ ಬಿಟ್ಟು ಕೊಡಬೇಕು ಎಂದು ಸಲಹೆ ನೀಡಿದರು.

Advertisement

ಡಿಸಿಎಂ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದರಿಂದ ಗೌರವ ಕಡಿಮೆಯಾಗಲಿದ್ದು, ಈ ಕ್ರಮ ಸರಿಯಲ್ಲ ಎಂಬುದು ನನ್ನ ವಯಕ್ತಿಕ ಭಾವನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next