Advertisement

ಬಿಎಸ್‌ವೈ ರಾಜೀನಾಮೆಗೆ ಯತ್ನಾಳ್‌ ಆಗ್ರಹ

10:18 PM Sep 15, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಎಫ್ಐಆರ್‌ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿರುವುದರಿಂದ ಅವರು ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಾಹುಲಿ ಇರಲಿ ಯಾವ ಹುಲಿಯೇ ಇರಲಿ. ಕಾನೂನು ಎಲ್ಲರಿಗೂ ಒಂದೇ. ಹಿಂದೆ ಹವಾಲಾ ಆರೋಪ ಕೇಳಿ ಬಂದಾಗ ಅಡ್ವಾಣಿ ಅವರು ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಅವರ ಆದರ್ಶವನ್ನು  ಯಡಿಯೂರಪ್ಪ  ಪಾಲಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next