Advertisement

ಜಿಲ್ಲಾಡಳಿತದಿಂದ ಬಸವ ಜಯಂತಿ ಆಚರಣೆ

01:37 PM Apr 27, 2020 | Suhan S |

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬಸವ ಜಯಂತಿ ಅಂಗವಾಗಿ ಕಲಾಭವನ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾಲಾರ್ಪಣೆ ಮಾಡಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Advertisement

ಈ ವೇಳೆ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಡಿಸಿ ದೀಪಾ ಚೋಳನ್‌, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಇದ್ದರು. ಇದಲ್ಲದೇ ಮುರುಘಾಮಠದಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ನಗರದ ಬಸವ ಭಕ್ತರ ಮನೆಗಳಲ್ಲಿ ಬಸವ ಜಯಂತಿ ಆಚರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next